Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ, ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಕೆಡುಕರಿಗೋ ಕರ್ತನು ಕೋಪದ ಮುಖವುಳ್ಳವನಾಗಿರುತ್ತಾನೆ ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀತಿವಂತರನ್ನು ಪ್ರಭುವು ಕಾಯುತ್ತಾನೆ; ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ. ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ನೀತಿವಂತರ ಮೇಲೆ ಕರ್ತದೇವರು ದೃಷ್ಟಿ ಇಡುತ್ತಾರೆ. ಅವರ ಪ್ರಾರ್ಥನೆಗಳಿಗೆ ಕರ್ತದೇವರು ಕಿವಿಗೊಡುತ್ತಾರೆ. ಆದರೆ ಕೆಟ್ಟದ್ದನ್ನು ಮಾಡುವವರಿಗೆ ದೇವರು ವಿಮುಖರಾಗಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕಶ್ಯಾಕ್ ಮಟ್ಲ್ಯಾರ್, ಸರ್ವೆಸ್ವರಾಚೆ ನದರ್ ನಿತಿನ್ ಚಲ್ತಲ್ಯಾಂಚ್ಯಾ ವರ್ತಿ ಹಾಯ್ ಅನಿ ತೆಚಿ ಕಾನಾ ತೆಂಚ್ಯಾ ಮಾಗ್ನಿಚ್ಯಾ ವರ್ತಿ ಹಾಯ್, ತೆಚ್ಯಾ ಸಾಟ್ನಿ ಕಾನಾಬಿ ಉಗ್ಡಿಚ್ ಹಾತ್, ಖರೆ ಸರ್ವೆಸ್ವರ್ ವಾಯ್ಟ್ ಕರ್ತಲ್ಯಾಂಚ್ಯಾ ವಿರೊದ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:12
21 ತಿಳಿವುಗಳ ಹೋಲಿಕೆ  

ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.


ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.


ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.


ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.


ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”


ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


“‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


“ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು