Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಂದು ವೇಳೆ ನೀತಿಯ ನಿವಿುತ್ತವೇ ಬಾಧೆಪಟ್ಟರೆ ನೀವು ಧನ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಬರೆ ಕರ್ತನಾ ಬಿ ತುಮ್ಕಾ ತರಾಸ್ ಸೊಸುಕ್ ಗಾವ್ತಾ ಹೊಲ್ಯಾರ್ ತುಮ್ಚೆ ನಸಿಬ್ ಕೌಡೆ ಖರೆ! ಕೊನ್ ಬಿ ತುಮ್ಕಾ ತರಾಸ್ ಸೊಸುಕ್ ಗಾವ್ತಾ ಹೊಲ್ಯಾರ್ ತುಮಿ ನಿತಿವಂತ್ ! ತೆಕಾ ತುಮಿ ಭಿಂವ್ತಲೆ ನಕ್ಕೊ ಅನಿ ಚಿಂತುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:14
29 ತಿಳಿವುಗಳ ಹೋಲಿಕೆ  

ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.


ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.


ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ.


ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.


ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.


ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.


ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ.


ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು.


ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು.”


ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.


ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು