Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಶಿಕಾಪಾ ಕರ್ತಲೊ ದೆವಾಚಿ ಗೊಸ್ಟಿಯಾಚ್ ಶಿಕ್ವುಂದಿತ್, ಸೆವಾ ಕರ್ತಲೊ ಮಾನುಸ್ ದೆವಾನ್ ದಯಾ ಕರುನ್ ದಿಲ್ಲ್ಯಾ ಬಳಾವೈನಾ ಸೆವಾ ಕರುಂದಿತ್, ತುಮಿ ಅಸೆ ಕರ್ಲ್ಯಾರ್ ತುಮ್ಚ್ಯಾ ಹರ್ ಎಕ್ ಕಾಮಾತ್ನಿ ಬಿ ಜೆಜುಕ್ರಿಸ್ತಾ ವೈನಾ ದೆವಾಕ್ ಹೊಗ್ಳಾಪ್ ಹೊತಾ, ಅಧಿಕಾರ್ ಅನಿ ಮಹಿಮಾ ಸದಾ ಸರ್ವತಾಕ್ ತೆಜೆಚ್ ಹೊಂವ್ದಿ ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:11
47 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.


ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.


ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.


ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.


ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.


ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.


ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.


ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.


ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.


ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.


ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.


ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”


ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.


ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.


ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.


ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.


ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.


ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು