1 ಪೇತ್ರನು 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಕಶ್ಯಾಕ್ ಮಟ್ಲ್ಯಾರ್, ಝಡ್ತಿಚೊ ಯೆಳ್ ಶುರು ಹೊಲಾ ದೆವಾಚ್ಯಾ ಗುಡಿತ್ ಲೊಕಾಕ್ನಿ ಅದ್ದಿ ಝಡ್ತಿ ಕರುನ್ ಹೊತಾ, ಅಮ್ಚ್ಯಾಕ್ನಾ ತೆ ಶುರು ಹೊಲ್ಯಾರ್ ದೆವಾಚಿ ಬರಿ ಖಬರ್ ಮಾನಿನಸಲ್ಲ್ಯಾ ಲೊಕಾಕ್ನಿ ಕಾಯ್ ಹೊತಾ ಆಸಿಲ್? ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.