Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸಗ್ಳ್ಯಾಚೆ ಅಂತ್ ಜಗೊಳ್ ಯೆಲಾ, ತೆಚ್ಯಾ ಸಾಟ್ನಿ ತುಮ್ಚ್ಯಾ ಮಾಗ್ನಿಂಚ್ಯಾ ಸಾಟ್ನಿ ತುಮಿ ಹುಶಾರ್‍ಕಿನ್ ಅನಿ ಶಿಸ್ತಿನ್ ರ್‍ಹಾವ್ಚೆ, ಅನಿ ತುಮ್ಕಾ ಸಂಬಾಳುನ್ ಘೆವ್ನ್ ಜಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:7
34 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.


ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.


ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,


ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.


ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.


ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.


“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”


ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.


ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.


ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,


“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.


ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.


ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.


ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು