Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಸೆಚ್ ತುಮಿ ದಾಂಡ್ಗ್ಯಾ ಲೊಕಾನು ತುಮಿ ಜಾನ್ತ್ಯಾಕ್ನಿ ಖಾಯ್ಲ್ ಹೊವ್ನ್ ಚಲಾ, ಅನಿ ತುಮಿ ಸಗ್ಳೆ ಜಾನಾ ಖಾಯ್ಲ್ ಚಲ್ತಲೆ ಮನ್ತಲಿ ಅಂಗಿ ನೆಸಾ ಅಸೆ ಎಕಾಮೆಕಾಚಿ ಸೆವಾ ಕರಿಸಾರ್ಕೆ ಹೊಂವ್ದಿ, ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಪುಸ್ತಕ್ ಮನ್ತಾ ಗರುಕಿ ಕರ್ತಲ್ಯಾಕ್ನಿ ದೆವ್ ವಿರೊದ್ ಕರ್ತಾ, ಖರೆ ಖಾಲ್ತಿ ಹೊವ್ನ್ ಚಲ್ತಲ್ಯಾಕ್ನಿ ದೆವ್ ಕುರ್ಪಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:5
27 ತಿಳಿವುಗಳ ಹೋಲಿಕೆ  

ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.


ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.


ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


“‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.


ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.


ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.


ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.


ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.


ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು.


ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.


ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.


ನೀವು ಹಾಗಿರಬಾರದು, ನಿಮ್ಮಲ್ಲಿ ದೊಡ್ಡವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.


ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.


ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.


ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು