Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವು ಕಂಡು ಕೇಳಿದ್ದು ನಿಮಗೂ ಗೊತ್ತಾಗಿ ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವು ನೋಡಿದವುಗಳನ್ನೂ ಕೇಳಿದವುಗಳನ್ನೂ ಈಗ ನಿಮಗೆ ಹೇಳುತ್ತೇವೆ. ಏಕೆಂದರೆ ನೀವು ನಮ್ಮ ಅನ್ಯೋನ್ಯತೆಯಲ್ಲಿ ಪಾಲುಗಾರರಾಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಈ ಅನ್ಯೋನ್ಯತೆಯು ತಂದೆಯಾದ ದೇವರ ಮತ್ತು ಆತನ ಮಗನಾದ ಯೇಸು ಕ್ರಿಸ್ತನ ಸಂಗಡವಿರುವಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮಿ ಬಗಟಲ್ಲೆ ಅನಿ ಆಯ್ಕಲ್ಲೆ ಅತ್ತಾ ತುಮ್ಕಾ ಸಾಂಗ್ತಾಂವ್, ಅಸೆ ಕಶ್ಯಾಕ್ ಮಟ್ಲ್ಯಾರ್ ತುಮಿ ಅಮ್ಚ್ಯಾ ವಾಂಗ್ಡಾ ಮಿಳುನ್ ಭಾಗ್ ಘೆವ್ನ್ ರ್‍ಹಾವ್ಚೆ ಮನುನ್ ಅಮ್ಚಿ ಆಶಾ, ಅಮ್ಚ್ಯಾ ಬಾಬಾ ದೆವಾಚ್ಯಾ ಅನಿ ತೆಚ್ಯಾ ಲೆಕಾ ಜೆಜು ಕ್ರಿಸ್ತಾತ್ ಎಕ್ವಟ್ಟಾನ್ ವಾಂಗ್ಡಾ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 1:3
38 ತಿಳಿವುಗಳ ಹೋಲಿಕೆ  

ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.


ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.


ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.


ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.


ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.


“ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ,


ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.


ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.


ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.


ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.


“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.


“ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;


ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.


ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.


ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.


ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.


ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.


ಇಗೋ, ಇವುಗಳನ್ನೆಲ್ಲಾ ನನ್ನ ಕಣ್ಣು ಕಂಡಿದೆ, ಕಿವಿಯು ಕೇಳಿ ಗ್ರಹಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು