Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬರೆಯುತಿಹೆನು ಪ್ರಿಯಮಕ್ಕಳಿರಾ, ಇದನ್ನು ಏಕೆನೆ, ಕ್ರಿಸ್ತನಾಮದ ನಿಮಿತ್ತ ಕ್ಷಮಿಸಲಾಯಿತು ನಿಮ್ಮ ಪಾಪಗಳನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪ್ರಿಯರಾದ ಮಕ್ಕಳೇ, ಕ್ರಿಸ್ತನ ಹೆಸರಿನ ನಿವಿುತ್ತ ನಿಮ್ಮ ಪಾಪಗಳು ಕ್ಷವಿುಸಲ್ಪಟ್ಟಿರುವದರಿಂದ ನಿಮಗೆ ಬರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪ್ರಿಯ ಮಕ್ಕಳೇ, ನಿಮ್ಮ ಪಾಪಗಳು ಕ್ರಿಸ್ತನ ಮೂಲಕ ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಿಯ ಮಕ್ಕಳೇ, ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲಾಗಿರುವುದರಿಂದ ನಾನು ನಿಮಗೆ ಬರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾಜ್ಯಾ ಪೊರಾನು, ಕ್ರಿಸ್ತಾಚ್ಯಾ ನಾವಾ ವೈನಾ ತುಮ್ಚ್ಯಾ ಪಾಪಾಂಚಿ ಮಾಪಿ ಗಾವ್ಲಾ, ತೆಚ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:12
22 ತಿಳಿವುಗಳ ಹೋಲಿಕೆ  

ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.


“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.


ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.


ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ.


ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.


ಯೇಸು ಅವರ ನಂಬಿಕೆಯನ್ನು ನೋಡಿ, “ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಅಂದನು.


ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.


ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.


ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.


ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು