Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೂ ನಾನೀಗ ನಿಮಗೆ ಬರೆಯುತ್ತಿರುವುದು ಒಂದು ವಿಧದಲ್ಲಿ ಹೊಸ ಆಜ್ಞೆಯೇ ಸರಿ. ಅದರ ನೈಜಗುಣವು ಕ್ರಿಸ್ತಯೇಸುವಿನಲ್ಲಿ ಬೆಳಗಿದಂತೆ, ನಿಮ್ಮ ಜೀವನದಲ್ಲೂ ಬೆಳಗುತ್ತದೆ. ಏಕೆಂದರೆ, ಕತ್ತಲು ಕಳೆದುಹೋಗುತ್ತಿದೆ; ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೂ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಹೇಗಂದರೆ ಕತ್ತಲೆಯು ಕಳೆದುಹೋಗುತ್ತದೆ, ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಈ ಆಜ್ಞೆಯನ್ನು ನಾನು ನಿಮಗೆ ಹೊಸ ಆಜ್ಞೆಯೋ ಎಂಬಂತೆ ಬರೆಯುತ್ತಿದ್ದೇನೆ. ಈ ಆಜ್ಞೆಯು ಸತ್ಯವಾದದ್ದು. ಅದರ ಸತ್ಯತೆಯನ್ನು ನೀವು ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಕಾಣಬಹುದು. ಕತ್ತಲೆಯು ಕಳೆದುಹೋಗುತ್ತಿದೆ ಮತ್ತು ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತಿರುಗಿ ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯೇ. ಇದು ಕ್ರಿಸ್ತ ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ಸತ್ಯವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜಾಲ್ಯಾರ್‌ ಬಿ ಮಿಯಾ ತುಮ್ಕಾ ಲಿವ್ತಲೊ ಹುಕುಮ್ ನ್ಹವೊಚ್, ಕಶ್ಯಾಕ್ ಮಟ್ಲ್ಯಾರ್, ತೆಚೆ ಖರೆಪಾನ್ ಕ್ರಿಸ್ತಾತ್ ಅನಿ ತುಮ್ಚ್ಯಾ ಮದ್ದಿ ದಿಸುನ್ ಯೆತಾ. ತೆಚೆಸಾಟ್ನಿ ಕಾಳೊಕ್ ಸರುನ್ ಜಾವ್ಕಲಾಗ್ಲಾ, ಅನಿ ಖರೊ ಉಜ್ವೊಡ್ ಹೊಳ್ವಳುಕ್ ಲಾಗಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:8
31 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.


ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.


ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.


ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.


ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”


ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.


ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.


ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು