Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾವು ಮರಣವನ್ನು (ಪಾಪಗಳನ್ನು) ತೊರೆದು ಜೀವಕ್ಕೆ ಬಂದಿದ್ದೇವೆ ಎಂಬುದು ನಮಗೆ ಗೊತ್ತಿದೆ. ಕ್ರಿಸ್ತನಲ್ಲಿ ನಮ್ಮ ಸಹೋದರ ಸಹೋದರಿಯರನ್ನು ನಾವು ಪ್ರೀತಿಸುತ್ತಿರುವುದರಿಂದಲೇ ಇದನ್ನು ತಿಳಿದುಕೊಂಡಿದ್ದೇನೆ. ಪ್ರೀತಿಸದಿರುವ ವ್ಯಕ್ತಿಯು ಇನ್ನೂ ಮರಣದಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮಿ ಮರ್‍ನಾಕ್ ಸೊಡುನ್, ಶಾಶ್ವತ್ ಜಿವನಾತ್ ಹಾವ್ ಮನ್ತಲೆ ತುಮ್ಕಾ ಗೊತ್ತ್ ಹಾಯ್. ಅನಿ ಭಾವಾಂಚೊ ಅನಿ ಭೆನಿಯಾಂಚೊ ಪ್ರೆಮ್ ಕರ್ತಾಂವ್ ಮನುನ್ ಹೆ ಅಮ್ಕಾ ಕಳ್ತಾ, ಜೆ ಕೊನ್ ಪ್ರೆಮ್ ಕರಿನಾ ತೊ ಅಜುನ್ಬಿ ಮರ್ನಾಚ್ಯಾ ಪಾಸೆತ್ ಹಾಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:14
31 ತಿಳಿವುಗಳ ಹೋಲಿಕೆ  

ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.


ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು.


ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.


ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ.


ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.


ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.


ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.


ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,


ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.


ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.


ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.


ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.


ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.


ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.


ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.


ಅವನು ನಮ್ಮ ದೇಶವನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು” ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು