Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾವ ವಿಷಯದಲ್ಲಾದರೂ ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸಿದ್ದೇ ಆದರೆ ಎಲ್ಲವನ್ನೂ ಬಲ್ಲ ದೇವರು ನಮ್ಮ ಮನಸ್ಸಾಕ್ಷಿಗಿಂತಲೂ ದೊಡ್ಡವರೆಂಬುದು ನಮಗೆ ತಿಳಿದೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮತ್ತು ನಮ್ಮ ಹೃದಯವು ಯಾವ ವಿಷಯದಲ್ಲಿಯಾದರೂ ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೂ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವನಾಗಿದ್ದಾನೆಂದು ನಾವು ತಿಳಿದು ದೇವರ ಸಮಕ್ಷಮದಲ್ಲಿ ನಮ್ಮ ಹೃದಯವನ್ನು ಸಮಾಧಾನಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಕಶ್ಯಾಕ್ ಮಟ್ಲ್ಯಾರ್, ಅಮ್ಚೊ ಭುತ್ತುರ್ಲೊ ಮನ್ ಸಗ್ಳ್ಯಾ ವಿಶಯಾತ್ನಿ ದೊಶಿ ಮನುನ್ ಕರ್ಲ್ಯಾರ್ ಅನಿ ದೆವ್ ಅಮ್ಚೊ ಮನ್ ವಳ್ಕಲ್ಲ್ಯಾ ವೈನಾ ಅಮ್ಚೊ ಮನ್ ತೊ ವಳಕ್ತಲ್ಯಾತ್ ಮೊಟೊ,ತೆಕಾ ಸಗ್ಳೆ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:20
23 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.


ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”


ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.


ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ.


ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ.


ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.


ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,


ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.


ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?


ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.


ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು