Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಲೋಕಕ್ಕೆ ಸೇರಿದವರು. ಆದ್ದರಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ. ಎಂದೇ, ಲೋಕವು ಅವರಿಗೆ ಕಿವಿಗೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಲೋಕದಿಂದ ಹುಟ್ಟಿದವರಾಗಿದ್ದಾರೆ; ಈ ಕಾರಣದಿಂದ ಅವರು ಲೋಕಪ್ರೇರಿತರಾಗಿ ಮಾತಾಡುತ್ತಾರೆ. ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಜನರು (ಸುಳ್ಳುಬೋಧಕರು) ಈ ಲೋಕಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಅವರು ಹೇಳುವುದೆಲ್ಲವೂ ಈ ಲೋಕಕ್ಕೆ ಸೇರಿವೆ. ಅವರು ಏನೇ ಹೇಳಿದರೂ ಲೋಕವು ಕೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಜಗಾಕ್ ಬಗುನ್ ಜಗಾಚ್ಯಾ ನಮನಿಚ್ ಬೊಲ್ತ್ಯಾತ್ ಅನಿ ಹ್ಯೊ ಜಗ್ ತೆನಿ ಸಾಂಗ್ತಲ್ಯಾಕ್ ಕಾನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:5
15 ತಿಳಿವುಗಳ ಹೋಲಿಕೆ  

ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ.


ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.


ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.


ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.


ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು