Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾವಾದರೋ ದೇವರಿಗೆ ಸೇರಿದವರು. ದೇವರನ್ನು ಅರಿತವನು ನಮಗೆ ಕಿವಿಗೊಡುತ್ತಾನೆ. ದೇವರಿಗೆ ಸೇರದವನು ನಮಗೆ ಕಿವಿಗೊಡುವುದಿಲ್ಲ. ಇದರಿಂದಲೇ ಸತ್ಯವನ್ನು ಸಾರುವ ಆತ್ಮ ಯಾವುದು ಮತ್ತು ಅಸತ್ಯವನ್ನು ಸಾರುವ ಆತ್ಮ ಯಾವುದು ಎಂಬುದು ನಮಗೆ ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾವಂತೂ ದೇವರಿಂದ ಹುಟ್ಟಿದವರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಂದ ಹುಟ್ಟದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯವನ್ನು ಬೋಧಿಸುವ ಆತ್ಮ, ಅದು ಸುಳ್ಳನ್ನು ಬೋಧಿಸುವ ಆತ್ಮ ಎಂದು ಇದರಿಂದಲೇ ತಿಳುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾವಾದರೋ ದೇವರಿಂದ ಬಂದವರು. ಆದ್ದರಿಂದ ದೇವರನ್ನು ಬಲ್ಲ ಜನರು ನಮಗೆ ಕಿವಿಗೊಡುತ್ತಾರೆ, ಆದರೆ ದೇವರಿಂದ ಬಂದಿಲ್ಲದ ಜನರು ನಮ್ಮ ಮಾತುಗಳನ್ನು ಕೇಳುವುದಿಲ್ಲ. ಯಾವುದು ಸತ್ಯವನ್ನು ಬೋಧಿಸುವ ಆತ್ಮ, ಯಾವುದು ಸುಳ್ಳನ್ನು ಬೋಧಿಸುವ ಆತ್ಮ ಎಂಬುದನ್ನು ಹೀಗೆ ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಮಿ ದೆವಾಚಿ ಪೊರಾ, ಜೆ ಕೊನ್ ದೆವಾಕ್ ವಳಕ್ತಾ ತೊ ಅಮ್ಕಾಬಿ ವಳಕ್ತಾ, ಜೆ ಕೊನ್ ದೆವಾಚೊ ನ್ಹಯ್ ತೊ ಅಮ್ಕಾ ಕಾನ್ ದಿ ನಾ, ಹೆಚ್ಯಾ ವೈನಾ ಖರ್‍ಯಾ ಅನಿ ಝುಟ್ಯಾ ಆತ್ಮ್ಯಾಚ್ಯಾ ಮದ್ದಿ ಹೊತ್ತೊ ಪರಕ್ ಕಾಯ್ ಮನುನ್ ಅಮಿ ವಳಕ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:6
33 ತಿಳಿವುಗಳ ಹೋಲಿಕೆ  

ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.


ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.


ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.


ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.


ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”


ಅವರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದರು. ಅದಕ್ಕೆ ಯೇಸು, “ನೀವು ನನ್ನನ್ನೂ ತಿಳಿದಿಲ್ಲ ಹಾಗೂ ನನ್ನ ತಂದೆಯನ್ನೂ ತಿಳಿದಿಲ್ಲ. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿದಿರುವಿರಿ” ಎಂದು ಉತ್ತರ ಕೊಟ್ಟನು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.


ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.


ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.


“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.


ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,


ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.


ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.


ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ.


ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.


ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.


ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು