Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು, ಆ ಜೀವವು ಆತನ ಮಗನಲ್ಲಿ ಅದೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಮಗೆ ನಿತ್ಯಜೀವವನ್ನು ತಾನು ದಯಪಾಲಿಸಿರುವುದಾಗಿ ದೇವರು ಹೇಳಿದನು. ಈ ನಿತ್ಯಜೀವವು ಆತನ ಮಗನಲ್ಲಿದೆ. (ಯೇಸು)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಿ ಸಾಕ್ಷಿ ಖಲಿ ಮಟ್ಲ್ಯಾರ್, ಅಮ್ಕಾ ದೆವಾನ್ ಅಮ್ಕಾ ನಿರಂತರ್ ಜಿವನ್ ದಿಲ್ಯಾನಾಯ್, ತೊ ಜಿವ್ ತೆಚ್ಯಾ ಲೆಕಾಚ್ಯಾ ಭುತ್ತುರ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:11
37 ತಿಳಿವುಗಳ ಹೋಲಿಕೆ  

ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.


ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.


ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.


ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.


ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.


ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.


ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ.


ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು.


ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.


ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,


ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.


ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.


ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.


ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,


ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು.


ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು