Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಹನ್ನಳು - ಸ್ವಾಮೀ, ಹಾಗಲ್ಲ; ನಾನು ಬಹುದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ಹೊಯ್ದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹನ್ನಳು “ಸ್ವಾಮೀ, ನಾನು ಯಾವುದೇ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿದಿಲ್ಲ. ನಾನು ಬಹುದುಃಖಿತಳು. ನಾನು ಯೆಹೋವನಲ್ಲಿ ನನ್ನ ಎಲ್ಲ ತೊಂದರೆಗಳನ್ನು ನಿವೇದಿಸಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಹನ್ನಳು ಅವನಿಗೆ ಉತ್ತರವಾಗಿ, “ನನ್ನ ಒಡೆಯನೇ, ಹಾಗಲ್ಲ. ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ. ನಾನು ದ್ರಾಕ್ಷಾರಸವನ್ನಾದರೂ ಮದ್ಯಪಾನವನ್ನಾದರೂ ಕುಡಿದವಳಲ್ಲ. ನಾನು ಯೆಹೋವ ದೇವರ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ತೋಡಿಕೊಳ್ಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:15
12 ತಿಳಿವುಗಳ ಹೋಲಿಕೆ  

ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.”


ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.


ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.


ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.


ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು” ಎಂದು ಹೇಳಿದಳು.


ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು