Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಆಕೆಯ ಗಂಡ ಎಲ್ಕಾನನು ಆಕೆಗೆ, “ಹನ್ನಾ, ಏಕೆ ಅಳುತ್ತಿರುವೆ? ಊಟಮಾಡದಿರುವುದಕ್ಕೆ ಕಾರಣ ಏನು? ವ್ಯಸನಪಡುವುದು ಏಕೆ? ಹತ್ತು ಮಕ್ಕಳಿಗಿಂತಲು ನಾನು ನಿನಗೆ ಹೆಚ್ಚಲ್ಲವೆ?” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ - ಹನ್ನಾ, ಏಕೆ ಅಳುತ್ತೀ? ಉಣ್ಣದಿರುವದಕ್ಕೇನು ಕಾರಣ? ನೀನು ವ್ಯಸನಪಡುವದೇಕೆ? ನಾನು ನಿನಗೆ ಹತ್ತು ಮಂದಿ ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವಳ ಗಂಡನಾದ ಎಲ್ಕಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ನಿನಗೆ ಹತ್ತು ಗಂಡುಮಕ್ಕಳಿಗಿಂತಲೂ ಹೆಚ್ಚಾಗಿದ್ದೇನಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅವಳ ಗಂಡ ಎಲ್ಕಾನನು ಅವಳಿಗೆ, “ಹನ್ನಳೇ, ಏಕೆ ಅಳುತ್ತೀ? ಏಕೆ ಊಟಮಾಡದೆ ಇದ್ದೀ? ನಿನ್ನ ಮನ ಏಕೆ ಕುಂದಿದೆ? ಹತ್ತು ಮಂದಿ ಪುತ್ರರಿಗಿಂತ ನಾನು ನಿನಗೆ ಹೆಚ್ಚಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:8
11 ತಿಳಿವುಗಳ ಹೋಲಿಕೆ  

ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ” ಎಂದು ಹೇಳಿದರು.


ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.


ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು.


ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.


ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.


“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.


ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು.


ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು