Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್‌ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಮುವೇಲನು, “ನೀನು ಅಲ್ಲಿಂದ ಮುಂದೆ ಹೋಗುತ್ತಾ ತಾಬೋರಿನ ಹತ್ತಿರವಿರುವ ಒಂದು ದೊಡ್ಡ ಓಕ್ ವೃಕ್ಷದ ಬಳಿಗೆ ಬರುವೆ. ಅಲ್ಲಿ ನಿನ್ನನ್ನು ಮೂರು ಜನರು ಭೇಟಿಯಾಗುತ್ತಾರೆ. ಆ ಮೂರು ಜನರು ದೇವರ ಆರಾಧನೆಗಾಗಿ ಬೇತೇಲಿಗೆ ಹೋಗುತ್ತಿರುತ್ತಾರೆ. ಮೊದಲನೆಯವನು ಮೂರು ಮರಿ ಹೋತಗಳನ್ನೂ ಎರಡನೆಯವನು ಮೂರು ರೊಟ್ಟಿಗಳನ್ನೂ ಮೂರನೆಯವನು ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋಗುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನೀನು ಆ ಸ್ಥಳವನ್ನು ಬಿಟ್ಟು, ಆ ಕಡೆ ದಾಟಿ, ತಾಬೋರಿನ ಹತ್ತಿರವಿರುವ ಅಲ್ಲೋನ್ ವೃಕ್ಷದ ಬಳಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:3
22 ತಿಳಿವುಗಳ ಹೋಲಿಕೆ  

ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.


ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.


ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.


ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು.


ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.


ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.


ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ತಾಬೋರ್, ಶಹಚೀಮಾ, ಬೇತ್‌ಷೆಮೆಷ್‌ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,


ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.


ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.


ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.


“‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.


“‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.


“‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.


ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.


ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.


ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.


ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು