Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ನೀನು ಗಿಬಿಯತ್ ಎಲೋಹಿಮಿಗೆ ಹೋಗುವೆ. ಅಲ್ಲಿ ಒಂದು ಫಿಲಿಷ್ಟಿಯರ ಕೋಟೆಯಿದೆ. ನೀನು ಆ ಪಟ್ಟಣಕ್ಕೆ ಬಂದಾಗ, ಪ್ರವಾದಿಗಳ ಗುಂಪೊಂದು ಹೊರಬರುತ್ತದೆ. ಈ ಪ್ರವಾದಿಗಳು ಆರಾಧನಾ ಸ್ಥಳದಿಂದ ಇಳಿದು ಬರುತ್ತಾರೆ, ಅವರು ಪ್ರವಾದಿಸುತ್ತಿರುತ್ತಾರೆ. ಅವರು ಸ್ವರಮಂಡಲವನ್ನೂ ದಮ್ಮಡಿಯನ್ನೂ ಕೊಳಲನ್ನೂ ಕಿನ್ನರಿಯನ್ನೂ ನುಡಿಸುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:5
27 ತಿಳಿವುಗಳ ಹೋಲಿಕೆ  

ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.


ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು.


ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, ನನಗೆ “ಗೊತ್ತುಂಟು ನೀವು ಸುಮ್ಮನಿರಿ” ಎಂದು ಉತ್ತರ ಕೊಟ್ಟನು.


ಬೇತೇಲಿನ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನನ್ನು, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, “ಗೊತ್ತಿದೆ ನೀವು ಸುಮ್ಮನಿರಿ” ಎಂದನು.


ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.


ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.


ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.


ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.


ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.


ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.


ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.


ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.


ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.


ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.


ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.


ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು.


ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.


ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೊರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು