Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ತಿಂಗಳ ನಂತರ ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಸಂಧಾನ ಮಾಡಿಕೋ; ನಾವು ನಿನಗೆ ಅಧೀನರಾಗಿರುತ್ತೇವೆ,” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಮ್ಮೋನಿಯನಾದ ನಾಹಾಷನು ಹೊರಟುಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆಹಾಕಲು ಯಾಬೇಷಿನವರು ಅವನನ್ನು - ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನ ಸೇವಕರಾಗಿರುವೆವು ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್‌ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:1
23 ತಿಳಿವುಗಳ ಹೋಲಿಕೆ  

ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.


ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿದನು.


ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.


ಮಿಚ್ಪೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್‍ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.


“ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.


ಅದನ್ನು ನೀನು ಸದಾ ಆಳಾಗಿ ಸೇರಿಸಿಕೊಳ್ಳುವಂತೆ, ನಿನ್ನೊಂದಿಗೆ ಒಪ್ಪಂದ ಮಾಡಿಕೊಳ್ಳುವುದೋ?


ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.


ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.


ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.


ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.


ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು.


ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.


ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು


ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ


ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.


ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.


ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.


ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನವು ಯಾಬೇಷ್ ಗಿಲ್ಯಾದವರಿಗೆ ಮುಟ್ಟಿತು.


ಆಗ ಅವರಲ್ಲಿರುವ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು, ಅವರ ಎಲುಬುಗಳನ್ನು ಅಲ್ಲಿದ್ದ ಏಲಾ ಮರದ ಕೆಳಗೆ ಸಮಾಧಿ ಮಾಡಿ, ಏಳು ದಿನಗಳ ವರೆಗೆ ಉಪವಾಸ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು