Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಮುವೇಲನು ಜನರಿಗೆ, “ಬನ್ನಿ, ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಘೋಷಿಸೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಮುವೇಲನು ಜನರಿಗೆ - ಬನ್ನಿರಿ; ಗಿಲ್ಗಾಲಿಗೆ ಹೋಗಿ ಅರಸುತನವನ್ನು ಸ್ಥಿರಪಡಿಸೋಣ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ಸಮುವೇಲನು, “ನಾವೆಲ್ಲ ಗಿಲ್ಗಾಲಿಗೆ ಹೋಗಿ ಸೌಲನನ್ನು ಮತ್ತೆ ರಾಜನನ್ನಾಗಿ ಮಾಡೋಣ” ಎಂದು ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಸಮುಯೇಲನು ಜನರಿಗೆ, “ನಾವು ಗಿಲ್ಗಾಲಿಗೆ ಹೋಗಿ, ಅಲ್ಲಿ ರಾಜ್ಯತ್ವವನ್ನು ದೃಢೀಕರಿಸೋಣ ಬನ್ನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:14
8 ತಿಳಿವುಗಳ ಹೋಲಿಕೆ  

ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು.


ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರುಗಿ ಬರುತ್ತಿದ್ದನು.


ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.


ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, “ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು.


ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.


ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು