Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದ್ದರಿಂದ ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ ಮತ್ತು ಸಮುವೇಲ ಎಂಬವರನ್ನು ಕಳುಹಿಸಿದನು. ನಿಮ್ಮನ್ನು ಸುತ್ತುವರಿದಿದ್ದ ಶತ್ರುಗಳಿಂದ ಯೆಹೋವನು ರಕ್ಷಿಸಿದನು. ನೀವು ಸುರಕ್ಷಿತವಾಗಿ ವಾಸಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:11
13 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಅವನು, “ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಈ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಯರಿಂದ ಬಿಡಿಸು” ಎಂದು ಹೇಳಿದನು.


ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರುಗಿ ಇಸ್ರಾಯೇಲ್ಯರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.


ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಅವರು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.


ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.


ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, “ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದನು.


ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.


ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.


ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.


ಉಲಾಮನ ಮಗನು ಬೆದಾನ್. ಇವರು ಮನಸ್ಸೆಯ ಮೊಮ್ಮಗ ಹಾಗೂ ಮಾಕೀರನ ಮಗ. ಇವರು ಗಿಲ್ಯಾದನ ಸಂತಾನದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು