Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇನ್ನು ಇವನೇ ನಿಮ್ಮನ್ನು ಮುನ್ನಡೆಸುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮ ಮಧ್ಯದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇನ್ನು ಮುಂದೆ ಇವನೇ ನಿಮ್ಮನ್ನು ನಡಿಸುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮ ಮಧ್ಯದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಗ ನಿಮ್ಮನ್ನು ಮುನ್ನಡೆಸಲು ಒಬ್ಬ ರಾಜನಿದ್ದಾನೆ. ನಾನು ಮುದುಕನಾಗಿರುವೆ ಮತ್ತು ನನ್ನ ತಲೆ ನರೆತುಹೋಗಿದೆ. ನನ್ನ ಗಂಡುಮಕ್ಕಳು ನಿಮ್ಮೊಂದಿಗಿದ್ದಾರೆ. ನಾನು ಚಿಕ್ಕಂದಿನಿಂದಲೇ ನಿಮ್ಮ ನಾಯಕನಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈಗ ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ನಾನು ವೃದ್ಧನಾಗಿ ನರೆ ಬಂದವನಾದೆನು. ನನ್ನ ಪುತ್ರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯ ಮೊದಲ್ಗೊಂಡು ಈ ದಿನದವರೆಗೂ ನಿಮ್ಮ ಮುಂದೆ ನಾಯಕನಾಗಿ ನಡೆದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:2
17 ತಿಳಿವುಗಳ ಹೋಲಿಕೆ  

ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.


ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು.


ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.


ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.


ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.


ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ಆದರೆ ಏಲಿಯು, “ನನ್ನ ಮಗನೇ, ಸಮುವೇಲನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು.


ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’


ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ


ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.


ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.


ಆತನು ಇಸ್ರಾಯೇಲ್ಯರ ಹಿರಿಯ ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಅಲ್ಲದೆ ಎಲ್ಲಾ ಇಸ್ರಾಯೇಲರ ಜನರನ್ನು ತನ್ನ ಬಳಿಗೆ ಕರಿಸಿ ಅವರಿಗೆ, “ನಾನು ದಿನತುಂಬಿದ ಮುದುಕನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು