Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಂಡು ಆತನನ್ನು ಸತ್ಯದಿಂದಲೂ ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:24
17 ತಿಳಿವುಗಳ ಹೋಲಿಕೆ  

ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.


ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.


ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.


ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ. ಕಾಫ್.


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.


ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.


ಮೋಶೆ ಇಸ್ರಾಯೇಲರನ್ನು ಕರೆದು, “ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಮುಂದೆ ಫರೋಹನಿಗೂ, ಅವನ ಪರಿವಾರದವರಿಗೂ ಮತ್ತು


ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು