Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್‌ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಆಗ ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್ ರಾಜನಿಗೂ ಮಾರಿಬಿಡಲಾಯಿತು. ಇವರು ದಂಡೆತ್ತಿ ಬಂದು ಅವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್‍ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆದರೆ ನಿಮ್ಮ ಪೂರ್ವಿಕರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟದ್ದರಿಂದ ಆತನು ಅವರನ್ನು ಸೀಸೆರನ ಗುಲಾಮರಾಗಲು ಬಿಟ್ಟುಬಿಟ್ಟನು. ಸೀಸೆರನು ಹಾಚೋರಿನ ಸೈನ್ಯಾಧಿಪತಿ. ನಂತರ ಯೆಹೋವನು ಅವರನ್ನು ಫಿಲಿಷ್ಟಿಯರ ಮತ್ತು ಮೋವಾಬ್ ರಾಜನ ಗುಲಾಮರಾಗುವಂತೆ ಬಿಟ್ಟುಬಿಟ್ಟನು. ಅವರೆಲ್ಲರು ನಿಮ್ಮ ವಂಶದವರ ವಿರುದ್ಧ ಹೋರಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆದರೆ ಅವರು ತಮ್ಮ ದೇವರಾದ ಯೆಹೋವ ದೇವರನ್ನು ಮರೆತು ಹೋದಾಗ, ದೇವರು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:9
15 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.


ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.


ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.


ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.


ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.


ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,


ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.


ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.


ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?


ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು