Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಸಮುವೇಲನು - ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಮುವೇಲನು, “ನೀನು ಬುದ್ಧಿಹೀನಕೃತ್ಯವನ್ನು ಮಾಡಿದೆ. ನಿನ್ನ ದೇವರಾದ ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಿದ್ದರೆ, ನಿನ್ನ ಕುಟುಂಬವು ಇಸ್ರೇಲನ್ನು ಶಾಶ್ವತವಾಗಿ ಆಳುವಂತೆ ಯೆಹೋವನು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:13
23 ತಿಳಿವುಗಳ ಹೋಲಿಕೆ  

ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು.


ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.


ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.


ಆತನು ರಾಜನಿಗೆ, ‘ನೀನು ಮೂರ್ಖ’ ಪ್ರಭುಗಳಿಗೆ, ‘ನೀವು ಕೆಟ್ಟವರು’ ಎಂದು ಹೇಳಬಲ್ಲನೇ?


ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


“ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು.


ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.


ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.


ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು.


ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.


ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸ.


ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು