Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿನ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ದಿನ ಸೌಲನ ಮಗ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲು ದಂಡಿಗೆ ವಿರೋಧವಾಗಿ ಹೋಗೋಣ ಬಾ,” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದು ದಿವಸ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಂದು ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊತ್ತುತರುವ ಯುವಕನೊಂದಿಗೆ ಮಾತನಾಡುತ್ತಾ, “ಕಣಿವೆಯ ಆಚೆಗಿರುವ ಫಿಲಿಷ್ಟಿಯರ ಪಾಳೆಯಕ್ಕೆ ಹೋಗೋಣ” ಎಂದು ಹೇಳಿದನು. ಆದರೆ ಯೋನಾತಾನನು ತನ್ನ ತಂದೆಗೆ ಇದನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ಕಾಲದಲ್ಲಿ, ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಯುವಕನಿಗೆ, “ನಾವು ನಮಗೆದುರಾಗಿರುವ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ,” ಎಂದನು. ಆದರೆ ತಂದೆಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:1
13 ತಿಳಿವುಗಳ ಹೋಲಿಕೆ  

ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.


ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.


ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.


ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ, ಊರಿನವರಿಗೂ ಹೆದರಿಕೊಂಡಿದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.


ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.


ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬೆ ವೃಕ್ಷದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಆರು ನೂರು ಮಂದಿ ಸೈನಿಕರೂ,


ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು