ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.
ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.
ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.
ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.
ಸೌಲನು ತನ್ನ ಜೊತೆಯಲ್ಲಿದ್ದವರಿಗೆ, “ನಮ್ಮನ್ನು ಬಿಟ್ಟುಹೋದವರು ಯಾರೆಂಬುದನ್ನು ಲೆಕ್ಕಮಾಡಿ ನೋಡಿರಿ” ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡಿದಾಗ ಯೋನಾತಾನನೂ, ಅವನ ಆಯುಧಗಳನ್ನು ಹೊರುವ ಸೇವಕನೂ ಇಲ್ಲವೆಂದು ತಿಳಿದುಬಂದಿತು.
ಸೌಲನು ತನ್ನ ಸೈನಿಕರನ್ನು, “ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು.