Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, “ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನನ್ನ ತಂದೆ ನಾಡಿಗೆ ನಷ್ಟವನ್ನುಂಟುಮಾಡಿದ್ದಾರೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದುದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಜನರು ಬಹಳವಾಗಿ ಬಳಲಿಹೋದದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ - ನನ್ನ ತಂದೆಯು ದೇಶಕ್ಕೆ ನಷ್ಟವನ್ನುಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಲಿಹೋಗಿದ್ದ ಜನರನ್ನು ಕಂಡ ಯೋನಾತಾನನು, “ನನ್ನ ತಂದೆಯು ದೇಶಕ್ಕೆ ತೊಂದರೆ ಮಾಡಿದನು. ನಾನು ಸ್ವಲ್ಪ ಜೇನನ್ನು ತಿಂದ ಮೇಲೆ ಎಷ್ಟೋ ಚೈತನ್ಯ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ಯೋನಾತಾನನು, “ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿದ್ದಾನೆ. ನಾನು ಈ ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ, ನನ್ನ ಕಣ್ಣುಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:29
5 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.


ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.


ಜನರು ತಾವು ಇಂದು ಶತ್ರುಗಳಿಂದ ಸುಲಿದುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚು ಮಂದಿ ಇದ್ದಾರೆ” ಅಂದನು.


ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು