Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದರೆ ಸಮುವೇಲನು ಅವನಿಗೆ - ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರ ಶೋಕವನ್ನುಂಟುಮಾಡಿತು; ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದ್ದರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೆ ಸಮುಯೇಲನು ಅವನಿಗೆ, “ನಿನ್ನ ಖಡ್ಗವು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗಿ ಮಾಡಿತೋ, ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು,” ಎಂದು ಹೇಳಿ, ಸಮುಯೇಲನು ಗಿಲ್ಗಾಲಿನಲ್ಲಿ ಯೆಹೋವ ದೇವರ ಮುಂದೆ ಅಗಾಗನಿಗೆ ಮರಣದಂಡನೆ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:33
17 ತಿಳಿವುಗಳ ಹೋಲಿಕೆ  

ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.


ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.


ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.


ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.


ತರುವಾಯ ಸಮುವೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ” ಎಂದನು. ಅಗಾಗನು ಮರಣಭಯ ತಪ್ಪಿತೆಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.


ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.


ಕಣ್ಣಿಗೆ ಕಣ್ಣನ್ನು, ಹಲ್ಲಿಗೆ ಹಲ್ಲನ್ನು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,


ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು