Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನ ಆತ್ಮ ಸೌಲನನ್ನು ಬಿಟ್ಟುಹೋಯಿತು. ಅವರಿಂದ ಬಂದ ದುರಾತ್ಮವೊಂದು ಅವನನ್ನು ಪೀಡಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಆತ್ಮವು ಸೌಲನನ್ನು ಬಿಟ್ಟುಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನ ಆತ್ಮವು ಸೌಲನನ್ನು ಬಿಟ್ಟುಹೋಯಿತು. ನಂತರ ಯೆಹೋವನು ದುರಾತ್ಮವೊಂದನ್ನು ಸೌಲನ ಬಳಿಗೆ ಕಳುಹಿಸಿದನು. ಅದು ಅವನಿಗೆ ಬಹಳ ತೊಂದರೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಆತ್ಮರು ಸೌಲನನ್ನು ಬಿಟ್ಟುಹೋಗಲು, ದೇವರಿಂದ ಬಂದ ದುರಾತ್ಮವು ಅವನನ್ನು ಪೀಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:14
17 ತಿಳಿವುಗಳ ಹೋಲಿಕೆ  

ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,


ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೇಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ. ದೇವರು ನನ್ನನ್ನು ಬಿಟ್ಟು ದೂರ ಹೋಗಿದ್ದಾನೆ. ಆತನು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದುದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು” ಅಂದನು.


ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.


ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.


ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!


‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.


ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.


ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ,


ಅವನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಪೀಡಿಸುತ್ತಾ ಇದೆ.


ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು” ಎಂದು ಹೇಳಿದರು.


ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.


ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ


ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು