Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?’ ಎಂದು ಕೇಳಿದರು. ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇವಿುಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ ಎಂದು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸಮುವೇಲನು ತನಗೆ ಯೆಹೋವನು ಹೇಳಿದಂತೆ ಮಾಡಿದನು. ಸಮುವೇಲನು ಬೆತ್ಲೆಹೇಮಿಗೆ ಹೋದನು. ಬೆತ್ಲೆಹೇಮಿನ ಹಿರಿಯರು ಭಯದಿಂದ ನಡುಗಿದರು. ಅವರು ಸಮುವೇಲನನ್ನು ಕಂಡು, “ನಿನ್ನ ಆಗಮನವು ಶುಭಕರವಾಗಿದೆಯೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಹೇಳಿದ ಪ್ರಕಾರ ಸಮುಯೇಲನು ಮಾಡಿ, ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ, ಅವನಿಗೆ, “ಸಮಾಧಾನವಾಗಿ ಬಂದೆಯೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:4
13 ತಿಳಿವುಗಳ ಹೋಲಿಕೆ  

ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು, “ನೀನು ಸಮಾಧಾನದಿಂದ ಬಂದಿರುವೆಯೋ?” ಎಂದು ಕೇಳಿದಳು. ಅವನು, “ಹೌದು ಸಮಾಧಾನದಿಂದ ಬಂದೆನು” ಎಂದನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.


ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;


ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.


ಆ ದಿನ ದಾವೀದನು ಯೆಹೋವನಿಗೆ ಭಯಪಟ್ಟು, “ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದುಕೊಂಡು,


ನಾನು ಪದ್ದನ್ ಅರಾಮಿನಿಂದ ಬರುವಾಗ ಕಾನಾನ್ ದೇಶದಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತುಹೋದಳು. ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದನು.


ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು