Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ ಇಲ್ಲಿ ಹತ್ತು ಗಿಣ್ಣದ ಉಂಡೆಗಳಿವೆ, ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಲ್ಲಿ ಹತ್ತು ಗಿಣ್ಣಿನ ಉಂಡೆಗಳೂ ಇವೆ. ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು, ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಇಲ್ಲಿ ಹತ್ತು ಗಿಣ್ಣಿನ ಗಡ್ಡೆಗಳಿರುತ್ತವೆ; ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿನ್ನ ಸಹೋದರರ ಸಹಸ್ರಾಧಿಪತಿಗೆ ಹತ್ತು ಉಂಡೆ ಗಿಣ್ಣನ್ನೂ ತೆಗೆದುಕೊಂಡು ಹೋಗು. ನಿನ್ನ ಸಹೋದರರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು, ಅವರು ಕ್ಷೇಮವಾಗಿದ್ದಾರೆಂಬುದಕ್ಕೆ ಒಂದು ಗುರುತನ್ನು ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಪ್ರಧಾನನಿಗೆ ಕೊಟ್ಟು, ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ, ಅವರ ಗುರುತನ್ನು ತೆಗೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:18
13 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.


ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.


ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.


ನೀನು ನನ್ನನ್ನು ಹಾಲಿನಂತೆ ಹೊಯ್ದು, ಮೊಸರಿನ ಹಾಗೆ ಹೆಪ್ಪುಗಟ್ಟಿಸಿದಿಯಲ್ಲಾ.


ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.


ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.


ಸೌಲನೂ, ಇಸ್ರಾಯೇಲರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರಲ್ಲಾ” ಎಂದು ಹೇಳಿದನು.


ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.


ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ” ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು.


ಅವನು ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿರಿ.


ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.


ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು