Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿ ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಅರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ರಥಗಳು ನಿಂತಿದ್ದ ಸ್ಥಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿಗಾಹಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆ ಜೆಸ್ಸೆಯನು ಹೇಳಿದವುಗಳನ್ನು ತೆಗೆದುಕೊಂಡು ಪಾಳೆಯದ ಬಂಡಿಗಳು ನಿಂತಿದ್ದ ಸ್ಥಳಕ್ಕೆ ಬಂದನು. ಸೈನ್ಯಗಳು ಯುದ್ಧಘೋಷಣೆಗಳನ್ನು ಹಾಕುವ ಸಮಯ ಅದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದಾವೀದನು ಮರುದಿನ ಬೆಳಿಗ್ಗೆ ಎದ್ದು ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಆರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ಬಂಡಿಗಳು ನಿಂತಿದ್ದ ಸ್ಥಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದಾವೀದನು ಉದಯಕಾಲದಲ್ಲಿ ಎದ್ದು, ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು, ತನ್ನ ತಂದೆ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತೆಗೆದುಕೊಂಡುಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ, ಸಲಕರಣೆಗಳು ಇರುವ ಸ್ಥಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:20
9 ತಿಳಿವುಗಳ ಹೋಲಿಕೆ  

ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು.


ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರ ಹೋಗಿ, ಸೌಲನೂ, ನೇರನ ಮಗನಾದ ಅವನ ಸೇನಾಪತಿ ಅಬ್ನೇರನೂ ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ರಥಗಳನ್ನು ಬಿಟ್ಟಿರುವ ಸ್ಥಳಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು.


ದಾವೀದನೂ ಮತ್ತು ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ, ಸೈನಿಕರೂ ಅವನ ಸುತ್ತಲೂ ಮಲಗಿದ್ದರು.


ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು, ತುಂಟತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ” ಎಂದು ಅವನನ್ನು ಗದರಿಸಿದನು.


ಸೌಲನೂ, ಇಸ್ರಾಯೇಲರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರಲ್ಲಾ” ಎಂದು ಹೇಳಿದನು.


ಇಸ್ರಾಯೇಲರು, ಫಿಲಿಷ್ಟಿಯರೂ ಎದುರೆದುರು ವ್ಯೂಹಕಟ್ಟುವಷ್ಟರಲ್ಲಿ


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.


ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು