Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಚೀಲದಲ್ಲಿ ಕೈ ಹಾಕಿ, ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು. ಅವನು ಬೋರಲುಬಿದ್ದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಕೈಯನ್ನು ಚೀಲದಲ್ಲಿ ಹಾಕಿ, ಒಂದು ಕಲ್ಲನ್ನು ತೆಗೆದು, ಅವನ ಕಣ್ಣಿಗೆ ಗುರಿಯಿಟ್ಟು, ಕವಣೆಯನ್ನು ಬೀಸಿ ಹೊಡೆದನು. ಆ ಕಲ್ಲು ಅವನ ಹಣೆಯನ್ನು ಹೊಕ್ಕಿತು. ಅವನು ಮುಖಕೆಳಗಾಗಿ ನೆಲಕ್ಕೆ ಉರುಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಕೈಯನ್ನು ಚೀಲದಲ್ಲಿ ಹಾಕಿ ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು; ಅವನು ಬೋರಲಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ದಾವೀದನು ತನ್ನ ಚೀಲದಿಂದ ಒಂದು ಕಲ್ಲನ್ನು ಹೊರತೆಗೆದನು. ಅದನ್ನು ಅವನು ಕವಣೆಯಲ್ಲಿ ಸಿಕ್ಕಿಸಿ ಬೀಸಿ ಹೊಡೆದನು. ಕವಣೆಯಿಂದ ಅವನು ಬೀಸಿದ ಕಲ್ಲು ಗೊಲ್ಯಾತನ ಹಣೆಗೆ ಬಡಿಯಿತು. ಆ ಕಲ್ಲು ಅವನ ಹಣೆಯಲ್ಲಿ ಆಳವಾದ ಗಾಯವನ್ನು ಮಾಡಿತು. ಕೂಡಲೇ ಗೊಲ್ಯಾತನು ಬೋರಲಾಗಿ ನೆಲದ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ದಾವೀದನು ತ್ವರೆಯಾಗಿ ಆ ಫಿಲಿಷ್ಟಿಯನಿಗೆದುರಾಗಿ ಓಡಿಹೋಗಿ, ತನ್ನ ಕೈಯನ್ನು ಚೀಲದಲ್ಲಿ ಹಾಕಿ, ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು, ಕವಣೆಯಲ್ಲಿಟ್ಟು ಬೀಸಿ, ಫಿಲಿಷ್ಟಿಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕದ್ದರಿಂದ, ಅವನು ನೆಲದ ಮೇಲೆ ಬೋರಲು ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:49
6 ತಿಳಿವುಗಳ ಹೋಲಿಕೆ  

ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು.


ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.


ಕೂಡಲೇ ಆ ಫಿಲಿಷ್ಟಿಯನು ಹೊರಟು ದಾವೀದನೊಡನೆ ಯುದ್ಧಮಾಡುವುದಕ್ಕೆ ಸಮೀಪಿಸಿದಾಗ ದಾವೀದನು ಫಿಲಿಷ್ಟಿಯರ ಸೈನ್ಯದ ಕಡೆಗೆ ಓಡಿಹೋಗಿ ಆ ಫಿಲಿಷ್ಟಿಯನನ್ನು ಸಂಧಿಸಿ,


ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು