Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಹೀಗೆ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಕಲ್ಲಿನಿಂದ ಆ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಫಿಲಿಷ್ಟಿಯರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ದಾವೀದನು ಓಡುತ್ತಾ ಹೋಗಿ ಫಿಲಿಷ್ಟಿಯನ ಪಕ್ಕದಲ್ಲಿ ನಿಂತುಕೊಂಡನು. ದಾವೀದನು ಗೊಲ್ಯಾತನ ಕತ್ತಿಯನ್ನು ಒರೆಯಿಂದ ತೆಗೆದು ಅದೇ ಕತ್ತಿಯಿಂದ ಅವನ ತಲೆಯನ್ನು ಕತ್ತರಿಸಿ ಹಾಕಿದನು. ದಾವೀದನು ಈ ರೀತಿಯಲ್ಲಿ ಗೊಲ್ಯಾತನನ್ನು ಕೊಂದನು. ಫಿಲಿಷ್ಟಿಯರು ತಮ್ಮ ನಾಯಕನು ಸತ್ತದ್ದನ್ನು ನೋಡಿದಾಗ ಹಿಂದಿರುಗಿ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ದಾವೀದನ ಕೈಯಲ್ಲಿ ಖಡ್ಗ ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಖಡ್ಗವನ್ನು ತೆಗೆದುಕೊಂಡು, ಅದನ್ನು ಒರೆಯಿಂದ ಕಿತ್ತು, ಅವನನ್ನು ಕೊಂದು, ಅವನ ತಲೆಯನ್ನು ಕಡಿದುಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತು ಹೋದದ್ದನ್ನು ಕಂಡಾಗ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:51
10 ತಿಳಿವುಗಳ ಹೋಲಿಕೆ  

ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.


ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು, ಏಫೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ. ಅದನ್ನೇ ಕೊಡು” ಎಂದು ಹೇಳಿ ತೆಗೆದುಕೊಂಡನು.


ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು.


ದಾವೀದನನು ಸೌಲನ ಭಯದಿಂದ ಅದೇ ದಿನ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.


ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.


ಅವರು ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕತ್ತರಿಸಿ, ಅದನ್ನು ತೆಗೆದುಕೊಂಡು, ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು