Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮಾರನೆಯ ದಿನ ದೇವರಿಂದ ಬಂದ ದುರಾತ್ಮವೊಂದು ಸೌಲನನ್ನು ಆವರಿಸಿತು. ಅವನು ಬುದ್ಧಿಗೆಟ್ಟು ಮನೆಯೊಳಗೇ ಕೂಗಾಡತೊಡಗಿದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ವಾಡಿಕೆಯ ಪ್ರಕಾರ ದಾವೀದನು ಕಿನ್ನರಿ ಬಾರಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ಕ್ರಮದ ಪ್ರಕಾರ ಕಿನ್ನರಿಯನ್ನು ಬಾರಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮಾರನೆಯ ದಿನ, ದೇವರಿಂದ ಬಂದ ದುರಾತ್ಮವು ಸೌಲನನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿತು. ಸೌಲನು ತನ್ನ ಮನೆಯಲ್ಲಿ ಹುಚ್ಚನಂತೆ ಕೂಗಿಕೊಳ್ಳುತ್ತಿದ್ದನು. ಆಗ ದಾವೀದನು ಎಂದಿನಂತೆ ಕಿನ್ನರಿಯನ್ನು ಬಾರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮಾರನೆಯ ದಿವಸದಲ್ಲಿ ದೇವರಿಂದ ಅನುಮತಿಸಿದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಬುದ್ಧಿಗೆಟ್ಟು ಮನೆಯಲ್ಲಿ ಕೂಗಾಡತೊಡಗಿದನು. ಆಗ ದಾವೀದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಕಿನ್ನರಿಯನ್ನು ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:10
17 ತಿಳಿವುಗಳ ಹೋಲಿಕೆ  

ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.


ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.


ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.


ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.


“ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.


ಅಂದಿನಿಂದ ಅವನು ದಾವೀದನನ್ನು ಸಂಶಯದಿಂದ ನೋಡುತ್ತಿದ್ದನು.


ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.


ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.


ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು