Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಫಿಲಿಷ್ಟಿಯ ಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಧಿಪತಿಗಳಲ್ಲಿ ದಾವೀದನೇ ಹೆಚ್ಚು ಪ್ರಭಾವಶಾಲಿಯಾಗಿ ಬರುತ್ತಿದ್ದುದರಿಂದ ಅವನ ಹೆಸರು ಬಹು ಸುಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಫಿಲಿಷ್ಟಿಯ ರಾಜರು ಯುದ್ಧಕ್ಕೆ ಬಂದಾಗಲೆಲ್ಲ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಈ ಕಾರಣ ಅವನ ಹೆಸರು ಸುಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಫಿಲಿಷ್ಟಿಯಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅಧಿಕಜಯಶೀಲನಾಗಿ ಬರುತ್ತಿದ್ದದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಫಿಲಿಷ್ಟಿಯ ಸೇನಾಧಿಪತಿಗಳು ಇಸ್ರೇಲರೊಂದಿಗೆ ಹೋರಾಡಲು ಹೋಗುತ್ತಲೇ ಇದ್ದರು. ಆದರೆ ದಾವೀದನು ಪ್ರತಿಸಲವೂ ಅವರನ್ನು ಸೋಲಿಸುತ್ತಿದ್ದನು. ದಾವೀದನು ಸೌಲನ ಒಬ್ಬ ಯಶಸ್ವಿಯಾದ ಅಧಿಕಾರಿಯಾಗಿದ್ದನು! ಆದ್ದರಿಂದ ದಾವೀದನು ಪ್ರಖ್ಯಾತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಫಿಲಿಷ್ಟಿಯರ ಪ್ರಧಾನರು ಯುದ್ಧಕ್ಕೆ ಬರುತ್ತಿದ್ದರು. ಅವರು ಹೊರಟು ಬಂದಾಗಲೆಲ್ಲಾ ದಾವೀದನು ಸೌಲನ ಸಮಸ್ತ ಸೇನಾಪತಿಗಳಿಗಿಂತ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಆದ್ದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:30
17 ತಿಳಿವುಗಳ ಹೋಲಿಕೆ  

ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.


ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡೆಸುತ್ತಿದ್ದನು. ಸೌಲನು ಇವನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇದು ಅವನ ಸೇವಕರಿಗೂ, ಎಲ್ಲಾ ಜನರಿಗೂ ಮೆಚ್ಚಿಗೆಯಾಯಿತು.


ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”


ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.


ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.


ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.


ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.


ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.


ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು.


ಫಿಲಿಷ್ಟಿಯರು ತಿರುಗಿ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಸಂಪೂರ್ಣವಾಗಿ ಸೋಲಿಸಿ, ಓಡಿಸಿಬಿಟ್ಟನು.


ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು.


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು