Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಮಾತುಗಳು ಸೌಲನಿಗೆ ಹಿಡಿಸಲಿಲ್ಲ. ಅವನು ಕೋಪದಿಂದ, “ದಾವೀದನು ಹತ್ತು ಸಾವಿರಗಟ್ಟಳೆ ಕೊಂದನೆಂದೂ ನಾನು ಸಾವಿರಗಟ್ಟಳೆ ಮಾತ್ರ ಕೊಂದೆನೆಂದು ಹಾಡುತ್ತಾರಲ್ಲಾ! ಹಾಗಾದರೆ ಅವನನ್ನು ರಾಜನನ್ನಾಗಿ ಮಾಡುವುದೊಂದೇ ಕಡಿಮೆ!” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹುವ್ಯಸನವೂ ಕೋಪವೂ ಉಂಟಾಗಿ ಅವನು - ದಾವೀದನು ಹತ್ತು ಸಾವಿರ ಗಟ್ಟಳೆಯಾಗಿ ಕೊಂದನೆಂದೂ ನಾನು ಸಾವಿರಗಟ್ಟಳೆಯಾಗಿ ಕೊಂದೆನೆಂದೂ ಹಾಡುತ್ತಾರಲ್ಲಾ! ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾದ ಹಾಗಾಯಿತು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೆಂಗಸರ ಈ ಹಾಡಿನಿಂದ ಸೌಲನು ಬಹಳವಾಗಿ ವ್ಯಸನಗೊಂಡನು ಮತ್ತು ರೋಷಗೊಂಡನು. “ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು ಎಂದು ಇವರು ಹಾಡುತ್ತಾರಲ್ಲಾ, ಇವನಿಗೆ ರಾಜ್ಯವೊಂದನ್ನು ಬಿಟ್ಟು ಬೇರೆ ಏನು ಕಡಿಮೆಯಾಯಿತು?” ಎಂದು ಆಲೋಚಿಸತೊಡಗಿದನು. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದ ಹೆಂಗಸರ ಮಾತುಗಳಿಂದ ಸೌಲನು ಚಿಂತೆಗೀಡಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದರಿಂದ ಸೌಲನಿಗೆ ಬಹು ಕೋಪವಾಯಿತು. ಆ ಹಾಡಿನಿಂದ ಅವನಿಗೆ ಬಹುಬೇಸರವಾಯಿತು. “ಇವರು ದಾವೀದನಿಗೆ ಹತ್ತು ಸಾವಿರಗಳಷ್ಟು ಎಂದು ಹಾಡಿದ್ದಾರೆ; ನನಗೆ ಸಾವಿರಗಳಷ್ಟೇ ಎಂದು ಹಾಡಿದ್ದಾರೆ; ಹಾಗಾದರೆ, ಅವನಿಗೆ ರಾಜ್ಯವಲ್ಲದೆ ಇನ್ನು ಆಗಬೇಕಾದದ್ದೇನು?” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:8
16 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?


ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.


ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?


ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.


ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.


ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು.


ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.


ಅಂದಿನಿಂದ ಅವನು ದಾವೀದನನ್ನು ಸಂಶಯದಿಂದ ನೋಡುತ್ತಿದ್ದನು.


ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.


ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು