Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರೆದುತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲೇ ಇರುವಂತೆ ಏರ್ಪಾಡಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಎಲ್ಲವನ್ನೂ ತಿಳಿಸಿದನು. ಬಳಿಕ ಯೋನಾತಾನನು ದಾವೀದನನ್ನು ಸೌಲನ ಹತ್ತಿರಕ್ಕೆ ಕರೆದುಕೊಂಡು ಬಂದನು. ದಾವೀದನು ಮೊದಲಿನಂತೆ ಸೌಲನ ಜೊತೆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೋನಾತಾನನು ದಾವೀದನನ್ನು ಕರೆದು, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ, ದಾವೀದನನ್ನು ಸೌಲನ ಬಳಿಗೆ ಕರೆತಂದನು. ಅವನು ಮುಂಚಿನ ಹಾಗೆಯೇ ಸೌಲನ ಬಳಿಯಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:7
10 ತಿಳಿವುಗಳ ಹೋಲಿಕೆ  

ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.


ಆ ದಿನದಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೇ, ತನ್ನ ಬಳಿಯಲ್ಲೇ ಇಟ್ಟುಕೊಂಡನು.


ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.


ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.


ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ಇದಲ್ಲದೆ ಯಾಕೋಬನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.


ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ, “ಯೆಹೋವನಾಣೆ, ಅವನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣಮಾಡಿದನು.


ಫಿಲಿಷ್ಟಿಯರು ತಿರುಗಿ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಸಂಪೂರ್ಣವಾಗಿ ಸೋಲಿಸಿ, ಓಡಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು