Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನ ವಿರೋಧಿಗಳು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂವಿುಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇವಿುಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. “ತಮ್ಮ ಅರಸನಿಗೆ ಬಲ ಕೊಡುವರು. ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:10
50 ತಿಳಿವುಗಳ ಹೋಲಿಕೆ  

ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.


ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.


ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.


ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.


ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.


ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.


ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.


ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,


ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.


ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,


ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!


ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು.


ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.


ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು


ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.


“ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”


ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.


ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು.


ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು