Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದನ್ನು ಮಾಂಸ ಬೇಯುತ್ತಿದ್ದ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದೆಲ್ಲವನ್ನು ಯಾಜಕನಿಗೆಂದು ಹೇಳಿ ತೆಗೆದುಕೊಳ್ಳುತ್ತಿದ್ದನು. ಶಿಲೋವಿಗೆ ಬರುವ ಇಸ್ರಯೇಲರೆಲ್ಲರಿಗು ಹೀಗೆಯೇ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದನ್ನು ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೋಸ್ಕರ ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯಾಜಕರ ಸೇವಕನು ತ್ರಿಶೂಲವನ್ನು ಕೊಪ್ಪರಿಗೆಯಲ್ಲಾಗಲಿ ತಪ್ಪಲೆಯಲ್ಲಾಗಲಿ ಗಡಿಗೆಯಲ್ಲಾಗಲಿ ಭಾಂಡದಲ್ಲಾಗಲಿ ಚುಚ್ಚಿ ಹೊರ ತೆಗೆದಾಗ, ಅದರೊಂದಿಗೆ ಬರುವ ಮಾಂಸವನ್ನು ಮಾತ್ರ ಯಾಜಕನು ಸ್ವೀಕರಿಸಬೇಕು. ಶೀಲೋವಿಗೆ ಯಜ್ಞವನ್ನರ್ಪಿಸಲು ಬರುವ ಎಲ್ಲ ಇಸ್ರೇಲರೊಂದಿಗೆ ಇದೇ ರೀತಿ ಮಾಡಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದನ್ನು ತಪ್ಪಲೆಯಲ್ಲಾಗಲಿ, ಪಾತ್ರೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವುದನ್ನೆಲ್ಲಾ ಯಾಜಕನು ತನಗೆ ತೆಗೆದುಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲರಿಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:14
9 ತಿಳಿವುಗಳ ಹೋಲಿಕೆ  

ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’


ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು.


“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯಜ್ಞವನ್ನರ್ಪಿಸುವುದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ, ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರುತ್ತಿದ್ದನು.


ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು.


ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು