Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರಿಬ್ಬರೂ ಅಡವಿಗೆ ಹೋದರು. ಅಲ್ಲಿ ಯೋನಾತಾನನು ದಾವೀದನಿಗೆ, “ಇಸ್ರಯೇಲ್ ದೇವರಾದ ಸರ್ವೇಶ್ವರನೇ ಸಾಕ್ಷಿ! ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತಾಡಿ, ನಿನ್ನ ಮೇಲೆ ಅವರಿಗೆ ದಯೆಯುಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಯಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರಿಬ್ಬರೂ ಅಡವಿಗೆ ಹೋದ ಮೇಲೆ ಯೋನಾತಾನನು ದಾವೀದನಿಗೆ - ಇಸ್ರಾಯೇಲ್‍ದೇವರಾದ ಯೆಹೋವನೇ ಸಾಕ್ಷಿ; ನಾನು ನಾಳೆ ಇಲ್ಲವೆ ನಾಡದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತಾಡಿ ನಿನ್ನ ಮೇಲೆ ಅವನಿಗೆ ದಯವುಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಯಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೋನಾತಾನನು ದಾವೀದನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಎದುರಿನಲ್ಲಿ ಈ ಪ್ರಮಾಣವನ್ನು ಮಾಡುತ್ತೇನೆ. ನನ್ನ ತಂದೆಯು ನಿನ್ನ ಬಗ್ಗೆ ಒಳ್ಳೆಯ ಭಾವನೆಯನ್ನು ಹೊಂದಿರುವನೊ ಇಲ್ಲವೊ ಎಂಬುದನ್ನು ತಿಳಿದುಕೊಳ್ಳುತ್ತೇನೆ. ನಂತರ ಸಂದೇಶವೊಂದನ್ನು ನಾನು ಮೂರು ದಿನಗಳೊಳಗಾಗಿ ನಿನಗೆ ಕಳುಹಿಸಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವ ದೇವರೇ, ನಾನು ನಾಳೆ ನಾಡಿದ್ದರೊಳಗೆ ನನ್ನ ತಂದೆಯನ್ನು ವಿಚಾರಿಸಲು, ದಾವೀದನ ಮೇಲೆ ದಯೆ ಇದ್ದರೆ ನಿನಗೆ ತಿಳಿಸುವ ಹಾಗೆ ಹೇಳಿಕಳುಹಿಸದೆ ಇದ್ದರೆ, ಯೆಹೋವ ದೇವರು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:12
10 ತಿಳಿವುಗಳ ಹೋಲಿಕೆ  

ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.


ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದುಕೊಳ್ಳುತ್ತಿದ್ದೆನು.


“ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.


ಯೋನಾತಾನನು ಅವನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು.


ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.


ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.


ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು