Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನ್ನ ತಂದೆ ನಿನಗೆ ಕೇಡುಮಾಡಲು ಮನಸ್ಸುಮಾಡಿದ್ದಾರೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ, ಸರ್ವೇಶ್ವರ ನನಗೆ ಏನು ಬೇಕಾದರೂ ಮಾಡಲಿ. ಅವರು ನನ್ನ ತಂದೆಯೊಂದಿಗೆ ಇದ್ದಹಾಗೆ ನಿನ್ನೊಂದಿಗೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ತಂದೆಯು ನಿನಗೆ ಕೇಡುಮಾಡ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ. ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ತಂದೆಯು ನಿನಗೆ ಕೇಡುಮಾಡಬೇಕೆಂದಿದ್ದರೆ, ಅದನ್ನು ನಾನು ನಿನಗೆ ತಿಳಿಸಿ, ನೀನು ಸುರಕ್ಷಿತವಾಗಿರಲು ಅವಕಾಶ ಮಾಡಿಕೊಡುತ್ತೇನೆ. ಈ ಕಾರ್ಯವನ್ನು ನಾನು ಮಾಡದೆ ಹೋದರೆ ಯೆಹೋವನು ನನ್ನನ್ನು ದಂಡಿಸಲಿ. ಯೆಹೋವನು ನನ್ನ ತಂದೆಯ ಜೊತೆಯಲ್ಲಿದ್ದಂತೆ ನಿನ್ನ ಜೊತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:13
22 ತಿಳಿವುಗಳ ಹೋಲಿಕೆ  

ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.


ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.


ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.


ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು


ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.


ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.


ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.


ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ


ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,


ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.


ನೀನು ಅಡಗಿಕೊಂಡಿರುವ ಹೊಲಕ್ಕೆ ನಾನು ಬಂದು, ನನ್ನ ತಂದೆಯ ಬಳಿಯಲ್ಲಿ ನಿಂತು, ನಿನ್ನ ವಿಷಯವನ್ನು ಮಾತನಾಡಿ, ಅವನಿಂದ ತಿಳಿದು ಬರುವ ವಿಚಾರವನ್ನು ನಿನಗೆ ತಿಳಿಸುವೆನು” ಎಂದು ಹೇಳಿದನು.


ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು.


ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು.


ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ, ಅರಸನೂ ಆದ ನಿನ್ನ ಕಾಲದಲ್ಲಿದ್ದದಕ್ಕಿಂತ ಹೆಚ್ಚಾಗಿ ಅಭಿವೃದ್ಧಿಮಾಡಲಿ” ಎಂದು ನುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು