Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಕೀಷನ ಸೇವಕರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಕೀಷನ ಸೇವಕರು, “’ಸೌಲನು ಕೊಂದನು ಸಾವಿರಗಟ್ಟಳೆ, ದಾವೀದನು ಕೊಂದನು ಹತ್ತುಸಾವಿರಗಟ್ಟಳೆ’ ಎಂಬುದಾಗಿ ಮಹಿಳೆಯರು ಕುಣಿಯುತ್ತಾ ಹಾಡಿದ್ದು ಇವನನ್ನು ಕುರಿತಲ್ಲವೇ?’ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಕೀಷನ ಸೇವಕರು - ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂಬದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನನ್ನು ಕುರಿತಲ್ಲವೋ? ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಕೀಷನ ಅಧಿಕಾರಿಗಳಿಗೆ ದಾವೀದನ ಆಗಮನ ಇಷ್ಟವಾಗಲಿಲ್ಲ. ಅವರು, “ಇವನು ದಾವೀದನು, ಇಸ್ರೇಲ್ ದೇಶದ ರಾಜನು. ಇವನನ್ನು ಕುರಿತೇ ಇಸ್ರೇಲರು ಹಾಡುತ್ತಾರೆ. ಅವರು ಇವನಿಗಾಗಿ ಹಾಡಿ ಕುಣಿಯುತ್ತಾರೆ. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು! ಎಂಬ ಈ ಹಾಡನ್ನು ಇಸ್ರೇಲರು ಹಾಡುತ್ತಾರೆ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಕೀಷನ ಸೇವಕರು ಅವನಿಗೆ, “ಇವನು ನಾಡಿನ ಅರಸನಾದ ದಾವೀದನಲ್ಲವೋ? “ ‘ಸೌಲನು ಸಾವಿರಗಳನ್ನೂ, ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನು,’ ಎಂದು ಸ್ತ್ರೀಯರು ನೃತ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಇವನನ್ನು ಕುರಿತಲ್ಲವೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:11
8 ತಿಳಿವುಗಳ ಹೋಲಿಕೆ  

‘ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು’ ಎಂದು ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಈ ದಾವೀದನನ್ನು ಕುರಿತೇ ಅಲ್ಲವೇ?” ಅಂದರು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲಿ ವಾಸವಾಗಿದ್ದರು.


ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.


ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.


ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು