Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಹೀಮೆಲೆಕನು, “ನಿಮ್ಮ ಎಲ್ಲಾ ಸೇವಕರಲ್ಲಿ, ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾರಿದ್ದಾನೆ? ದಾವೀದನು ನಿಮ್ಮ ಆಲೋಚಕರಲ್ಲೊಬ್ಬನೂ ತಮ್ಮ ಮನೆಯವರಲ್ಲಿ ಗೌರವಾನ್ವಿತನೂ ಆಗಿದ್ದಾನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಮಂತ್ರಾಲೋಚಕರಲ್ಲೊಬ್ಬನೂ ನಿನ್ನ ಮನೆಯಲ್ಲಿ ಘನವಂತನೂ ಆಗಿದ್ದಾನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಹೀಮೆಲೆಕನು, “ದಾವೀದನು ನಿನಗೆ ಬಹಳ ನಂಬಿಗಸ್ತನಾಗಿದ್ದಾನೆ. ದಾವೀದನಷ್ಟು ನಂಬಿಗಸ್ತನು ನಿನ್ನ ಇತರ ಅಧಿಕಾರಿಗಳಲ್ಲಿ ಇಲ್ಲವೇ ಇಲ್ಲ. ದಾವೀದನು ನಿನ್ನ ಸ್ವಂತ ಅಳಿಯ. ದಾವೀದನು ನಿನ್ನ ಅಂಗರಕ್ಷಕ ದಳಪತಿ. ದಾವೀದನನ್ನು ನಿನ್ನ ಸ್ವಂತ ಕುಟುಂಬವೆಲ್ಲ ಗೌರವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಹೀಮೆಲೆಕನು ಅರಸನಿಗೆ ಉತ್ತರವಾಗಿ, “ನಿನ್ನ ಸಮಸ್ತ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾರಿದ್ದಾರೆ? ಅವನು ಅರಸನಿಗೆ ಅಳಿಯನೂ ನಿಮ್ಮ ಅಂಗರಕ್ಷಕರ ನಾಯಕನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:14
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೋನಾತಾನನು, “ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?” ಎಂದು ತನ್ನ ತಂದೆಯನ್ನು ಕೇಳಿದನು.


ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.


ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.


ಆಗ ಸೌಲನು ಅವನಿಗೆ, “ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು, ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು


ಅವನು, “ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ.


ದಾವೀದನು ತನ್ನ ಸೇವಕರೊಡನೆ ಹೊರಟು, ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಜನರನ್ನು ಕೊಂದು, ಮುಂದೊಗಲುಗಳನ್ನು ತಂದು, ಅರಸನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.


ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.


ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು.


ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು