Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದುದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು,” ಎಂದು ಆಜ್ಞಾಪಿಸಿದನು. ಅವನು ನಾರುಮಡಿಯ ಏಫೋದನ್ನು ಧರಿಸಿಕೊಂಡಿದ್ದ ಎಂಬತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ - ನೀನು ಹೋಗಿ ಅವರನ್ನು ಕೊಲ್ಲು ಎಂದು ಆಜ್ಞಾಪಿಸಲು ಅವನು ನಾರು ಬಟ್ಟೆಯ ಏಫೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ರಾಜನು ದೋಯೇಗನಿಗೆ, “ನೀನು ಹೋಗಿ ಯಾಜಕರನ್ನು ಕೊಂದುಹಾಕು” ಎಂದು ಹೇಳಿದನು. ಆದ್ದರಿಂದ ಎದೋಮ್ಯನಾದ ದೋಯೇಗನು ಹೋಗಿ ಆ ದಿನ ಎಂಭತ್ತೈದು ಮಂದಿ ಯಾಜಕರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅರಸನು ದೋಯೇಗನಿಗೆ, “ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು,” ಎಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು, ನಾರುಬಟ್ಟೆಯ ಏಫೋದನ್ನು ಧರಿಸಿಕೊಳ್ಳುವವರಾದ ಎಂಬತ್ತೈದು ಯಾಜಕರನ್ನು ಆ ದಿನದಲ್ಲಿ ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:18
14 ತಿಳಿವುಗಳ ಹೋಲಿಕೆ  

ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.


ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ.


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.


ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.


ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.


ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.


ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು