Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಸೌಲನ ಮಗ ಯೋನಾತಾನನು ಅಲ್ಲಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ ದಾವೀದನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಸೌಲನ ಮಗನಾದ ಯೋನಾತಾನನು ಹೋರೆಷಿಗೆ ಹೋಗಿ ದಾವೀದನನ್ನು ಸಂಧಿಸಿ ದೇವರಲ್ಲಿ ಹೆಚ್ಚು ನಂಬಿಕೆಯನ್ನಿಡುವಂತೆ ಅವನನ್ನು ಪ್ರೋತ್ಸಾಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಸೌಲನ ಮಗ ಯೋನಾತಾನನು ಎದ್ದು ಮರುಭೂಮಿಯಲ್ಲಿರುವ ದಾವೀದನ ಬಳಿಗೆ ಹೋಗಿ, ಅವನನ್ನು ದೇವರಲ್ಲಿ ಬಲಪಡಿಸಿ ಸಹಾಯಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:16
16 ತಿಳಿವುಗಳ ಹೋಲಿಕೆ  

ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.


ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು


ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.


ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.


ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.


ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.


ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು.


ನಾನೂ ಬಾಯಿಮಾತಿಗಾಗಿ ನಿಮ್ಮನ್ನು ಧೈರ್ಯಗೊಳಿಸಿ, ತುಟಿಗಳ ಆದರಣೆಯಿಂದ ನಿಮ್ಮ ದುಃಖವನ್ನು ಶಮನಪಡಿಸಬಹುದಾಗಿತ್ತು.


ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.


ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು