Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುತ್ತಿದ್ದರು. ಅಷ್ಟರಲ್ಲಿ ಸೌಲನೂ ಅವನ ಜನರೂ ಬಂದು ಅವರನ್ನು ಸುತ್ತಿ ಹಿಡಿಯುವುದಕ್ಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸೌಲನು ಇದನ್ನು ಕೇಳಿ ಮಾವೋನ್ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು; ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ ಅವನ ಜನರೂ ಬಂದು ಅವರನ್ನು ಸುತ್ತಿ ಹಿಡಿಯುವದಕ್ಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೌಲನು ಬೆಟ್ಟದ ಒಂದು ದಿಕ್ಕಿನಲ್ಲಿದ್ದನು. ದಾವೀದ ಮತ್ತು ಅವನ ಜನರು ಅದೇ ಬೆಟ್ಟದ ಮತ್ತೊಂದು ದಿಕ್ಕಿನಲ್ಲಿದ್ದರು. ದಾವೀದನು ಸೌಲನಿಂದ ದೂರ ಹೋಗಲು ತವಕಿಸುತ್ತಿದ್ದನು. ದಾವೀದನನ್ನು ಅವನ ಜನರೊಡನೆ ಬಂಧಿಸಲು ಸೌಲನು ತನ್ನ ಸೈನಿಕರೊಂದಿಗೆ ಬೆಟ್ಟದ ಸುತ್ತಲೂ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು. ದಾವೀದನೂ, ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು. ಸೌಲನಿಗೆ ಭಯಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆಪಡುತ್ತಿದ್ದರು. ಆಗ ಸೌಲನೂ, ಅವನ ಜನರೂ ಅವರನ್ನು ಹಿಡಿಯುವಂತೆ ಸುತ್ತಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:26
17 ತಿಳಿವುಗಳ ಹೋಲಿಕೆ  

ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.


ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.


ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.


ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.


ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, “ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು” ಎಂದು ಹೇಳಿದನು.


ಬೇಗ ಹೋಗು ನಿಲ್ಲಬೇಡ” ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.


ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಲು ಅವನು ಓಡಿಹೋಗಿ ತಪ್ಪಿಸಿಕೊಂಡನು.


ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.


ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ಈ ವರ್ತಮಾನವು ದಾವೀದನಿಗೆ ತಲುಪಲು ಅವನು ಮಾವೋನಿನಲ್ಲಿರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು.


ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ, “ಬೇಗ ಬಾ, ಫಿಲಿಷ್ಟಿಯರು ದೇಶದೊಳಗೆ ನುಗ್ಗಿದ್ದಾರೆ” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು