Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಾವೀದನು ಕೆಯೀಲಾದಲ್ಲಿದ್ದಾನೆಂಬ ಸಮಾಚಾರ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ಅವನು ಅಗುಳಿಕದಗಳಿಂದ ಭದ್ರವಾಗಿರುವ ಕೋಟೆಯನ್ನು ಪ್ರವೇಶಿಸಿದ್ದಾನಲ್ಲವೆ? ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿಕದಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ; ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದಾವೀದನು ಈಗ ಕೆಯೀಲಾದಲ್ಲಿದ್ದಾನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು, “ದೇವರು ದಾವೀದನನ್ನು ನನಗೆ ಕೊಟ್ಟಿದ್ದಾನೆ! ದಾವೀದನು ತಾನಾಗಿಯೇ ಸಿಕ್ಕಿಹಾಕಿಕೊಂಡಿದ್ದಾನೆ. ಅವನು, ಬಾಗಿಲುಗಳಿರುವ ಹಾಗೂ ಕಬ್ಬಿಣದ ಸಲಾಕೆಗಳಿಂದ ಬೀಗ ಹಾಕಬಲ್ಲ ಬಾಗಿಲುಗಳಿರುವ ಪಟ್ಟಣದೊಳಕ್ಕೆ ಹೋಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಾವೀದನು ಕೆಯೀಲಾ ನಗರಕ್ಕೆ ಬಂದಿದ್ದಾನೆ ಎಂಬ ವಿಷಯ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ಅವನು ಬಾಗಿಲುಗಳೂ, ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಈಗ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:7
12 ತಿಳಿವುಗಳ ಹೋಲಿಕೆ  

ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.


ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.


ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು.


ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು,


ಕೆಯೀಲದಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹಿಡಿಯಲು ಹೋಗುವುದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು.


ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ, ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು