Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದಿಲ್ಲವೆಂದೂ, ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡು” ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದು ಇಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದು ಹಾಕುವುದಿಲ್ಲವೆಂದೂ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡು,” ಎಂದು ಬೇಡಿಕೊಂಡನು. ಹಾಗೆಯೇ ದಾವೀದನು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗಿರುವದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡು ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈಗ ನೀನು ನನಗೆ ಒಂದು ಪ್ರಮಾಣವನ್ನು ಮಾಡು. ನನ್ನ ಸಂತಾನದವರನ್ನು ನೀನು ಕೊಲ್ಲುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ನನಗೆ ಪ್ರಮಾಣಮಾಡು. ನನ್ನ ತಂದೆಯ ಕುಲದಲ್ಲಿ ನನ್ನ ಹೆಸರನ್ನು ನಾಶಮಾಡುವುದಿಲ್ಲವೆಂದು ಪ್ರಮಾಣ ಮಾಡು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ಕಡಿದುಬಿಡುವುದಿಲ್ಲವೆಂದೂ, ನನ್ನ ಗೋತ್ರದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ನನಗೆ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:21
9 ತಿಳಿವುಗಳ ಹೋಲಿಕೆ  

ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.


ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.


ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.


ಆಗ ಲಾಬಾನನು, “ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ” ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು.


ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.


ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.


ಯೆಹೋವನು ನನ್ನ ಸ್ವಾಮಿಯಾದ ನಿನಗೆ ವಾಗ್ದಾನಮಾಡಿರುವ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಲಿ. ನಿನ್ನನ್ನು ಇಸ್ರಾಯೇಲ್ಯರ ಪ್ರಭುವನ್ನಾಗಿ ಮಾಡಿದ ಮೇಲೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು